25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

ನಡ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಜು.೯ರಂದು ಕಾಲೇಜು ಸಭಾಂಗಣದಲ್ಲಿ ನಡೆಸಲಾಯಿತು.

ಉಜಿರೆಯ ದಂತ ವೈದ್ಯ ಡಾ| ಎಂ.ಎಂ. ದಯಾಕರ್ ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಅತಿ ದೊಡ್ಡ ಶಕ್ತಿ ಎಂದರೆ ಯುವಶಕ್ತಿ. ಈ ಯುವಶಕ್ತಿಯನ್ನು ನಾವು ಸರಿಯಾಗಿ ಬಳಸಿಕೊಂಡರೆ ನಮಗೆ ಗೆಲುವು ಸಾಧ್ಯ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮಕ್ಕಳಿಗೆ ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಪ್ರಭಾಕರ ಮಯ್ಯ, ಕೊಯ್ಯೂರು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮೋಹನ ಗೌಡ ಉಪಸ್ಥಿತರಿದ್ದರು.

ಪ್ರಾಚಾರ್ಯ ಚಂದ್ರಶೇಖರ್ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಹೂ ಕೊಟ್ಟು ಗೌರವಿಸಿದರು. ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ದೇವಾಡಿಗ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಶುಭ ಹಾರೈಸಿದರು.

ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ. ಸ್ವಾಗತಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶಿಲ್ಪಾ ಪ್ರಾಸ್ತಾವಿಸಿದರು. ಶ್ರೀಮತಿ ಸವಿತಾ ಧನ್ಯವಾದಗೈದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿವಿ ಕಾರ್ಯಕ್ರಮ ನಿರೂಪಿಸಿದರು.

Related posts

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!