September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

ವೇಣೂರು : ಐತಿಹಾಸಿಕ ಮಹತ್ತ್ವದ ವೇಣೂರಿನ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ 25 ವರ್ಷ ತುಂಬುವ ಸಂಭ್ರಮ. ಫಲ್ಗುಣಿ ಸೇವಾ ಸಂಘ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆಸಿಕೊಂಡು ಬರುತ್ತಿರುವ ಗಣೇಶೋತ್ಸವವನ್ನು ಈ ಬಾರಿ ಇನ್ನಷ್ಟು ಅದ್ಧೂರಿಯಾಗಿ ನೆರವೇರಿಸಲು ತೀರ್ಮಾನಿಸಲಾಗಿದೆ. ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬದ ಲಾಂಛನವನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಅನಾವರಣಗೊಳಿಸಿದರು.

ವೇಣೂರಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯರಾದ ಕೆ.ಶಿವರಾಮ ಹೆಗ್ಡೆ, ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಡಾ.ಶಾಂತಿ ಪ್ರಸಾದ್, ಭಾಸ್ಕರ ಪೈ, ಅಧ್ಯಕ್ಷರಾದ ಜಗದೀಶ್ ಡಿ ಕೆ, ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ವಿ ಎಸ್ ಜಯರಾಜ್, ಸದಸ್ಯರಾದ ಪ್ರಸನ್ನ ಹೆಬ್ಬಾರ್, ಶ್ರೀಕಾಂತ ಉಡುಪ ಹೇಮಂತ್ ಕುಮಾರ್, ಅರುಣ್ ಕುಮಾರ್ ಐಂದಲ್ಕೆ, ಸುದತ್ ಜೈನ್,, ಪ್ರಮೋದ್ ಕುಮಾರ್ ಜೈನ್, ಗಂಗಾಧರ ಆಚಾರ್ಯ, ಪ್ರಶಾಂತ ನಾಯಕ್, ಸದಾಶಿವ ಭಂಡಾರಿ, ಪ್ರಕಾಶ್ ಚಂದ್ರ ಹೆಗ್ಡೆ,ನಿರಂಜನ್ ಕೆ ಎಸ್, ಪ್ರಸಾದ ಜೈನ್, ಶ್ರೀ ಸದಾನಂದ ‘ ಬ್ರಹ್ಮ ಶ್ರೀ ‘, ಸೀತಾರಾಮ ಆಚಾರ್ಯ, ಗಿರೀಶ್ ಕೆ ಎಸ್, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮ್ಯಾನೇಜರ್ ಶಾಂತಿ ರಾಜ್ ಜೈನ್ ಹಾಗೂ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಶಿಕ್ಷಕ ಶಿಕ್ಷಕಿಯರು ಪಾಲ್ಗೊಂಡರು.

Related posts

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!