23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದ ಉದ್ಘಾಟನೆಯು ಜು. 12 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರಗಿತು.

ಸಂಸ್ಥೆಯ ಸಂಚಾಲಕರಾದ ವಂದನೀಯ. ಫಾ. ಅಬೆಲ್ ಲೋಬೊ ಉದ್ಘಾಟಿಸಿ ನೂತನ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವಾಣಿ ಪದವಿ ಕಾಲೇಜಿನ ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಿರ್ ಕೆ.ಎನ್ ಮಾತನಾಡಿ ನಾಯಕನಾದವನು ತಪ್ಪುಗಳನ್ನು ತನ್ನಮೇಲೆ ಹೊತ್ತುಕೊಂಡು ಶ್ರೇಯಸ್ಸನ್ನು ಎಲ್ಲರಿಗೂ ಕೊಡುತ್ತಾನೆ ಎಂದು ಹೇಳಿ, ವಿದ್ಯಾರ್ಥಿಗಳಿಗೆ ನಾಯಕತ್ವದ ಉಪಯೋಗ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ ವಿಜಯ್ ಲೋಬೊ ನೂತನ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ವಿದ್ಯಾರ್ಥಿ ಸೆಬಾಸ್ಟಿನ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕಿ ಹೆಝಲ್ ಜಿ಼ಷಾ ಪಿಂಟೋ ಧನ್ಯವಾದ ನೀಡಿದರು. ವಿಶ್ವಾಸ್ ವೇಗಸ್ ಕಾರ್ಯಕ್ರಮ ನಿರೂಪಿಸಿದರು.

Related posts

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ರೌಫ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!