28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ಜುಲೈ11 ರಂದು ಪಿಎಚ್.ಡಿ ಪದವಿ ನೀಡಲಾಯಿತು.

ಉಜಿರೆಯ ಲಲಿತನಗರದ ನಿವಾಸಿಯಾಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಪತ್ನಿ.

Related posts

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ವೇಣೂರು ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ: ಎಕ್ಸೆಲ್ ಕಾಲೇಜು ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಂದ ಲಾಂಛನ ಅನಾವರಣ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
error: Content is protected !!