23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ಜುಲೈ11 ರಂದು ಪಿಎಚ್.ಡಿ ಪದವಿ ನೀಡಲಾಯಿತು.

ಉಜಿರೆಯ ಲಲಿತನಗರದ ನಿವಾಸಿಯಾಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಪತ್ನಿ.

Related posts

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
error: Content is protected !!