March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11 ರಂದು ವರದಿಯಾಗಿದೆ.


ಜು. 11 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಉಪ ನೀರಿಕ್ಷಕರಾದ ಯಲ್ಲಪ್ಪ ಹೆಚ್ ಮಾದರರವರು ಸಿಬ್ಬಂದಿಗಳ ಜೊತೆಯಲ್ಲಿ ಕಡಿರುದ್ಯಾವರ ರಸ್ತೆಯಲ್ಲಿ ಬರುತ್ತಿರುವ ಸಮಯ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಡಿರುದ್ಯಾವರ ಗ್ರಾಮದ ಬೊಳ್ಳೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಕಳವು ಮಾಡಿಕೊಂಡು ಬರುತ್ತಿದ್ದುದನ್ನು ಪತ್ತೆಮಾಡಿದ್ದಾರೆ.


ಅಪಾದಿತ ಪ್ರತೀಕ್ಷ್ ಮತ್ತು ಸಾಗಾಟದ ಪಿಕಪ್ ವಾಹನ ಹಾಗೂ ಪಿಕಪ್ ವಾಹನದಲ್ಲಿದ್ದ ರೂ. 2ಸಾವಿರ ಮೌಲ್ಯದ ಮರಳು,3 ಕಬ್ಬಿಣದ ಬಕೆಟ್, ಮರಳು ತೆಗೆಯಲು ಉಪಯೋಗಿಸಿದ 1 ಕಬ್ಬಿಣದ ಸ್ಟ್ಯಾಂಡ್, 2 ಪ್ಲಾಸ್ಟಿಕ್ ಬುಟ್ಟಿ ಹಾಗೂ 2 ಕಬ್ಬಿಣದ ಹಾರೆಯನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ನಿಷೇಧಿತ ಅರಣ್ಯದಲ್ಲಿ ಟ್ರಕ್ಕಿಂಗ್: 103 ಪ್ರವಾಸಿಗರು ಪೊಲೀಸರ ವಶಕ್ಕೆ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!