ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಪ್ರಗತಿಬಂಧು ಸ್ವ ಸಹಾಯ ಸಂಘ ಒಕ್ಕೂಟ ಗುರುವಾಯನಕೆರೆ ಆಶ್ರಯದಲ್ಲಿ ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.
ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷ ಜಗದೀಶ್ ಶೆಟ್ಟಿ ಹಾಗೂ ನಿರ್ದೇಶಕ ದಿನೇಶ್ ಡಿ ರವರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮದಲ್ಲಿ ಸಿಗುವ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮದ ಪೂರ್ವ ತಯಾರಿಯಲ್ಲಿ ನಾವೆಲ್ಲರೂ ಸೇರಿ ಕಾರ್ಯಕ್ರಮದ ಜವಾಬ್ದಾರಿಯ ಬಗ್ಗೆ ವಿಂಗಡಣೆ ಮಾಡಿ ಕಾರ್ಯಕ್ರಮದ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ಯೋಜನಾಧಿಕಾರಿ ಅಶೋಕ್, ಎಸ್.ಡಿ.ಎಮ್ ಮಹಿಳಾ ಐಟಿಐ ಕಾಲೇಜು ಪ್ರಾಂಶುಪಾಲರು ಪ್ರಕಾಶ್ ಕಾಮತ್, ಸಂದೇಶ್, ಜಯರಾಜ್ ಸಂತೋಷ, ತಾಲೂಕಿನಲ್ಲಿ ಎಲ್ಲಾ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ವಿಪತ್ತು ಘಟಕದ ಸಂಯೋಜಕರು, ಭಜನಾ ಪರಿಷತ್ ನ ವಲಯ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು,











