September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಪ್ರಗತಿಬಂಧು ಸ್ವ ಸಹಾಯ ಸಂಘ ಒಕ್ಕೂಟ ಗುರುವಾಯನಕೆರೆ ಆಶ್ರಯದಲ್ಲಿ ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷ ಜಗದೀಶ್ ಶೆಟ್ಟಿ ಹಾಗೂ ನಿರ್ದೇಶಕ ದಿನೇಶ್ ಡಿ ರವರ ಉಪಸ್ಥಿತಿಯಲ್ಲಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಕಾರ್ಯಕ್ರಮದಲ್ಲಿ ಸಿಗುವ ಸೌಲಭ್ಯ ಬಗ್ಗೆ ಮಾಹಿತಿ ನೀಡಿದರು ಹಾಗೂ ಕಾರ್ಯಕ್ರಮದ ಪೂರ್ವ ತಯಾರಿಯಲ್ಲಿ ನಾವೆಲ್ಲರೂ ಸೇರಿ ಕಾರ್ಯಕ್ರಮದ ಜವಾಬ್ದಾರಿಯ ಬಗ್ಗೆ ವಿಂಗಡಣೆ ಮಾಡಿ ಕಾರ್ಯಕ್ರಮದ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ಯೋಜನಾಧಿಕಾರಿ ಅಶೋಕ್, ಎಸ್.ಡಿ.ಎಮ್ ಮಹಿಳಾ ಐಟಿಐ ಕಾಲೇಜು ಪ್ರಾಂಶುಪಾಲರು ಪ್ರಕಾಶ್ ಕಾಮತ್, ಸಂದೇಶ್, ಜಯರಾಜ್ ಸಂತೋಷ, ತಾಲೂಕಿನಲ್ಲಿ ಎಲ್ಲಾ ಮೇಲ್ವಿಚಾರಕ ಶ್ರೇಣಿ ಸಿಬ್ಬಂದಿಗಳು, ಎಲ್ಲಾ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ವಿಪತ್ತು ಘಟಕದ ಸಂಯೋಜಕರು, ಭಜನಾ ಪರಿಷತ್ ನ ವಲಯ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು,

Related posts

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya
error: Content is protected !!