30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!