September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!