July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಮಾ.16: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!