25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ಜು.11ರಂದು ನಡೆಯಿತು.


ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ಇವರು ಭಾಗವಹಿಸಿದ್ದರು .


ಪೋಷಕರನ್ನು ಕುರಿತು ಮಾತನಾಡಿದ ಇವರು ಮಕ್ಕಳಿಗೆ ಮನೆಯಿಂದಲೇ ಶಿಸ್ತಿನ ಬಗ್ಗೆ ಪಾಠವನ್ನು ಹೇಳಬೇಕು. ಪ್ರತಿಯೊಂದು ಮಗುವಿನ ಚಲನ ವಲನಗಳನ್ನು ಅರಿತು ಸೂಕ್ತ ರೀತಿಯ ಮಾರ್ಗದರ್ಶನಗಳನ್ನು ನೀಡಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಜೋಸೆಫ್ ಇವರು ಶಾಲಾ ಸಮಗ್ರ ಮಾಹಿತಿಯನ್ನು ನೀಡಿದರು. 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷ ರಾಜೇಶ್, ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಎ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ ಶ್ರೀಮತಿ ಉಷಾ ಧನ್ಯವಾದವಿತ್ತರು .

Related posts

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!