July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರ ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಮಂದಿ ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Related posts

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ “ಮುದ್ದಿಗೆ ಶಾಖೆ” ಉದ್ಘಾಟನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya
error: Content is protected !!