23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ ಇದರ ಕೇಂದ್ರೀಯ ಸಮಿತಿಯ ಸಭೆಯು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಜರಗಿತು.

ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯರನ್ನು ಗೌರವದಿಂದ ಕಾಣುವ ನಮ್ಮ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಹಿರಿಯರ ಮಾರ್ಗದರ್ಶನದಿಂದ ಸಮಾಜದಲ್ಲಿ ಉತ್ತಮ ಬದಲಾವಣೆಗಳು ಸಾಧ್ಯವಿದೆ ಎಂದು ಅವರು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ಹೊರ ಜಿಲ್ಲೆಗಳಲ್ಲಿಯೂ ಪ್ರತಿಷ್ಠಾನದ ಘಟಕಗಳನ್ನು ಆರಂಭಿಸುವ ಮೂಲಕ ಸೇವಾ ಚಟುವಟಿಕೆಗಳನ್ನು ವಿಸ್ತರಿಸಲು ಎಲ್ಲರೂ ಸಹಕರಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳು ಘಟಕದಿಂದ ನಡೆಸಿದ ಕಾರ್ಯಕ್ರಮದ ಮಾಹಿತಿ ನೀಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ವಿಚಾರ ವಿನಿಮಯದಲ್ಲಿ ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಕೇಂದ್ರ ಸಮಿತಿ ಉಪಾಧ್ಯಕ್ಷ ಯಂ. ಜಯರಾಮ ಭಂಡಾರಿ ಧರ್ಮಸ್ಥಳ, ಲೋಕೇಶ್ ಹೆಗ್ಡೆ ಪುತ್ತೂರು , ಕೋಶಾಧಿಕಾರಿ ಕೃಷ್ಣ ಶರ್ಮ ಅನಾರು, ಬಿ. ಭುಜಬಲಿ ಧರ್ಮಸ್ಥಳ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಸಂಚಾಲಕ ಭವಾನಿ ಶಂಕರ್ ಶೆಟ್ಟಿ ಪುತ್ತೂರು, ಪದ್ಯಾಣ ಕೇಶವ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾಣ್ಯಪ್ಪ ನಾಯ್ಕ್ ಉಜಿರೆ , ದಿನೇಶ್ ಗೌಡ ಗೇರುಕಟ್ಟೆ,ಉದಯಶಂಕರ ರೈ.ಕೆ, ರವೀಂದ್ರ ಶೆಟ್ಟಿ ಬಳೆಂಜ, ವಿಶ್ವಾಸ್ ರಾವ್ ಬೆಳ್ತಂಗಡಿ, ಸಾಂತೂರು ಶ್ರೀನಿವಾಸ ತಂತ್ರಿ, ಬಿ ಕುಸುಮಾವತಿ, ಗೋಪಾಲಕೃಷ್ಣ ಭಟ್ ಕಾಂಚೋಡು ಉಜಿರೆ, ಗಣೇಶ್ ಭಟ್ ಕುತ್ರೋಟ್ಟು, ಪ್ರೊ.ವೇದವ್ಯಾಸ ರಾಮಕುಂಜ, ಎಂ ವಿಶ್ವನಾಥ ಶೆಟ್ಟಿ ಸುಲ್ಕೇರಿ ಉಪಸ್ಥಿತರಿದ್ದರು.

ಜಿಲ್ಲಾ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು.ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಮತ್ತು ಬೆಳ್ತಂಗಡಿ ಘಟಕ ಕಾರ್ಯದರ್ಶಿ ಗಣೇಶ್ ಭಟ್. ಕೆ ಕಾರ್ಯಕ್ರಮ ನಿರೂಪಿಸಿದರು. ಬೆಳ್ತಂಗಡಿ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕೆ ವಂದಿಸಿದರು.

Related posts

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉರುವಾಲುಪದವು: ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya
error: Content is protected !!