24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ಜುಲೈ11 ರಂದು ಪಿಎಚ್.ಡಿ ಪದವಿ ನೀಡಲಾಯಿತು.

ಉಜಿರೆಯ ಲಲಿತನಗರದ ನಿವಾಸಿಯಾಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಪತ್ನಿ.

Related posts

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya
error: Content is protected !!