24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

ಕಕ್ಯ ಪದವು: “ಇಂದಿನ ಮಕ್ಕಳೇ ನಾಳಿನ ಪ್ರಜೆಗಳು; ಅವರಿಗೆಲ್ಲ ಬೇಕು ನಾಯಕರು” ಎಂಬಂತೆ ಎಲ್ ಸಿ ಆರ್ ವಿದ್ಯಾಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಉದ್ಘಾಟನಾ ಹಾಗೂ ಪ್ರಮಾಣವಚನ ಕಾರ್ಯಕ್ರಮವನ್ನು ಜು. 12ರಂದು ನೆರೆವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಜೋಸ್ಟಾನ್ ಲೋಬೋ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ವಿಜಯ, ಸಂಸ್ಥೆಯ ಸಂಯೋಜಕ ಯಶವಂತ ಜಿ ನಾಯಕ್ ಹಾಗೂ ಕಾರ್ಯಕ್ರಮದಲ್ಲಿ ಶ್ರೀಮತಿ ದಿವ್ಯಶ್ರೀ ಅಲ್ಲದೇ ಎಲ್ಲಾ ಶಿಕ್ಷಕ ವೃಂದ ಹಾಗೂ ಬೋಧಕೇತರ ವರ್ಗ ಉಪಸ್ಥಿತರಿದ್ದರು.

ಆಯ್ಕೆಯಾದ ಮಂತ್ರಿಮಂಡಲದ ಎಲ್ಲಾ ಸದಸ್ಯರುಗಳಿಗೆ ಬ್ಯಾಡ್ಜ್ ಗಳನ್ನು ವಿತರಿಸಿ ,ಹೂಗುಚ್ಛಗಳನ್ನುನೀಡುವುದರ ಮೂಲಕ ಸಂಸ್ಥೆಯ ಪ್ರಾಂಶುಪಾಲ, ಸಂಯೋಜಕ ಹಾಗೂ ಮುಖ್ಯ ಶಿಕ್ಷಕಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಶಾಲಾ ನಾಯಕಿ 10ನೇ ತರಗತಿಯ ಮನಸ್ವಿನಿ, ಉಪನಾಯಕಿಯಾಗಿ 9ನೇ ತರಗತಿಯ ಅದಿತಿ ಎಂ ಪ್ರಭು, ಶಿಕ್ಷಣ ಮಂತ್ರಿಗಳಾಗಿ ನವನೀತ್ ಮತ್ತು ಗೌತಮ್ ನಾಯಕ್, ಶಿಸ್ತಿನ ಹಾಗೂ ಆರೋಗ್ಯ ಮಂತ್ರಿಗಳಾಗಿ ಫಾತಿಮತ್ ಶೈಮ ಮತ್ತು ಸಾತ್ವಿಕ, ಕ್ರೀಡಾ ಮಂತ್ರಿಗಳಾಗಿ ಸಾನ್ವಿತ್ ಮತ್ತು ಚಿರಾಗ್, ಸಾಂಸ್ಕೃತಿಕ ಮಂತ್ರಿಗಳಾಗಿ ನಿಖಿಲ್ ಮತ್ತು ಚಿರಾಗ್ ಕೆ. ಎಸ್, ಗುಂಪಿನ ಪ್ರತಿನಿಧಿಗಳಾಗಿ ಪ್ರೀತಮ್, ಮೊಹಮ್ಮದ್ ಶಾಹಿಲ್, ಸಾನ್ವಿ ವೈ ಅಂಚನ್ ಮತ್ತು ಸಮೀಕ್ಷಾ ಇವರಿಗೆ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ ಇವರು ಪ್ರತಿಜ್ಞಾವಿಧಿಯನ್ನು ಬೋಧಿಸಿ ವಿದ್ಯಾರ್ಥಿಗಳಿಗೆ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳ ಬಗ್ಗೆ ಕಿವಿ ಮಾತನ್ನು ಹೇಳಿದರು.

ಶಾಲಾ ಪ್ರಾಂಶುಪಾಲ ಜೋಸ್ಟನ್ ಲೋಬೊ ಆಯ್ಕೆಯಾದ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.,

ವಿದ್ಯಾರ್ಥಿಗಳಾದ ರಶ್ಮಿ ಆರ್ ಪೂಜಾರಿ ಸ್ವಾಗತಿಸಿ, ದೀಪ್ತಿ ಹಾಗೂ ತನ್ವೀ ಕಾರ್ಯಕ್ರಮ ನಿರೂಪಿಸಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವು ಪ್ರತೀಕ್ಷ ವಂದಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya
error: Content is protected !!