22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11 ರಂದು ವರದಿಯಾಗಿದೆ.


ಜು. 11 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಉಪ ನೀರಿಕ್ಷಕರಾದ ಯಲ್ಲಪ್ಪ ಹೆಚ್ ಮಾದರರವರು ಸಿಬ್ಬಂದಿಗಳ ಜೊತೆಯಲ್ಲಿ ಕಡಿರುದ್ಯಾವರ ರಸ್ತೆಯಲ್ಲಿ ಬರುತ್ತಿರುವ ಸಮಯ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಡಿರುದ್ಯಾವರ ಗ್ರಾಮದ ಬೊಳ್ಳೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಕಳವು ಮಾಡಿಕೊಂಡು ಬರುತ್ತಿದ್ದುದನ್ನು ಪತ್ತೆಮಾಡಿದ್ದಾರೆ.


ಅಪಾದಿತ ಪ್ರತೀಕ್ಷ್ ಮತ್ತು ಸಾಗಾಟದ ಪಿಕಪ್ ವಾಹನ ಹಾಗೂ ಪಿಕಪ್ ವಾಹನದಲ್ಲಿದ್ದ ರೂ. 2ಸಾವಿರ ಮೌಲ್ಯದ ಮರಳು,3 ಕಬ್ಬಿಣದ ಬಕೆಟ್, ಮರಳು ತೆಗೆಯಲು ಉಪಯೋಗಿಸಿದ 1 ಕಬ್ಬಿಣದ ಸ್ಟ್ಯಾಂಡ್, 2 ಪ್ಲಾಸ್ಟಿಕ್ ಬುಟ್ಟಿ ಹಾಗೂ 2 ಕಬ್ಬಿಣದ ಹಾರೆಯನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya
error: Content is protected !!