22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11 ರಂದು ವರದಿಯಾಗಿದೆ.


ಜು. 11 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಉಪ ನೀರಿಕ್ಷಕರಾದ ಯಲ್ಲಪ್ಪ ಹೆಚ್ ಮಾದರರವರು ಸಿಬ್ಬಂದಿಗಳ ಜೊತೆಯಲ್ಲಿ ಕಡಿರುದ್ಯಾವರ ರಸ್ತೆಯಲ್ಲಿ ಬರುತ್ತಿರುವ ಸಮಯ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಡಿರುದ್ಯಾವರ ಗ್ರಾಮದ ಬೊಳ್ಳೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಕಳವು ಮಾಡಿಕೊಂಡು ಬರುತ್ತಿದ್ದುದನ್ನು ಪತ್ತೆಮಾಡಿದ್ದಾರೆ.


ಅಪಾದಿತ ಪ್ರತೀಕ್ಷ್ ಮತ್ತು ಸಾಗಾಟದ ಪಿಕಪ್ ವಾಹನ ಹಾಗೂ ಪಿಕಪ್ ವಾಹನದಲ್ಲಿದ್ದ ರೂ. 2ಸಾವಿರ ಮೌಲ್ಯದ ಮರಳು,3 ಕಬ್ಬಿಣದ ಬಕೆಟ್, ಮರಳು ತೆಗೆಯಲು ಉಪಯೋಗಿಸಿದ 1 ಕಬ್ಬಿಣದ ಸ್ಟ್ಯಾಂಡ್, 2 ಪ್ಲಾಸ್ಟಿಕ್ ಬುಟ್ಟಿ ಹಾಗೂ 2 ಕಬ್ಬಿಣದ ಹಾರೆಯನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!