23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11 ರಂದು ವರದಿಯಾಗಿದೆ.


ಜು. 11 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಉಪ ನೀರಿಕ್ಷಕರಾದ ಯಲ್ಲಪ್ಪ ಹೆಚ್ ಮಾದರರವರು ಸಿಬ್ಬಂದಿಗಳ ಜೊತೆಯಲ್ಲಿ ಕಡಿರುದ್ಯಾವರ ರಸ್ತೆಯಲ್ಲಿ ಬರುತ್ತಿರುವ ಸಮಯ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಡಿರುದ್ಯಾವರ ಗ್ರಾಮದ ಬೊಳ್ಳೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಕಳವು ಮಾಡಿಕೊಂಡು ಬರುತ್ತಿದ್ದುದನ್ನು ಪತ್ತೆಮಾಡಿದ್ದಾರೆ.


ಅಪಾದಿತ ಪ್ರತೀಕ್ಷ್ ಮತ್ತು ಸಾಗಾಟದ ಪಿಕಪ್ ವಾಹನ ಹಾಗೂ ಪಿಕಪ್ ವಾಹನದಲ್ಲಿದ್ದ ರೂ. 2ಸಾವಿರ ಮೌಲ್ಯದ ಮರಳು,3 ಕಬ್ಬಿಣದ ಬಕೆಟ್, ಮರಳು ತೆಗೆಯಲು ಉಪಯೋಗಿಸಿದ 1 ಕಬ್ಬಿಣದ ಸ್ಟ್ಯಾಂಡ್, 2 ಪ್ಲಾಸ್ಟಿಕ್ ಬುಟ್ಟಿ ಹಾಗೂ 2 ಕಬ್ಬಿಣದ ಹಾರೆಯನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!