22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!