25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya
error: Content is protected !!