September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ಸೆ.16: ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya
error: Content is protected !!