25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ಜು.11ರಂದು ನಡೆಯಿತು.


ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ಇವರು ಭಾಗವಹಿಸಿದ್ದರು .


ಪೋಷಕರನ್ನು ಕುರಿತು ಮಾತನಾಡಿದ ಇವರು ಮಕ್ಕಳಿಗೆ ಮನೆಯಿಂದಲೇ ಶಿಸ್ತಿನ ಬಗ್ಗೆ ಪಾಠವನ್ನು ಹೇಳಬೇಕು. ಪ್ರತಿಯೊಂದು ಮಗುವಿನ ಚಲನ ವಲನಗಳನ್ನು ಅರಿತು ಸೂಕ್ತ ರೀತಿಯ ಮಾರ್ಗದರ್ಶನಗಳನ್ನು ನೀಡಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಜೋಸೆಫ್ ಇವರು ಶಾಲಾ ಸಮಗ್ರ ಮಾಹಿತಿಯನ್ನು ನೀಡಿದರು. 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷ ರಾಜೇಶ್, ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಎ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ ಶ್ರೀಮತಿ ಉಷಾ ಧನ್ಯವಾದವಿತ್ತರು .

Related posts

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!