July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ಸಾಲ ಹಾಗೂ ಸಾಲೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಕ್ತ ವರ್ಷದಲ್ಲಿ ಸಂಘವು ರೂ.186 ಕೋಟಿ ವ್ಯವಹಾರ ನಡೆಸಿ ಒಂದು ಕೋಟಿ ತೊಂಬತ್ತು ಸಾವಿರದ ನಾಲ್ಕು ರೂಪಾಯಿ ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೀಪ್ತಿ,ಸಹನ ಪ್ರಾರ್ಥನೆಗೈದು, ನಿರ್ದೆಶಕಿ ಉಷಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!