September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರ ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಮಂದಿ ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Related posts

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya
error: Content is protected !!