25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರ ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಮಂದಿ ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Related posts

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 6.74 ಲಕ್ಷ ಲಾಭ, ಶೇ.20 ಡಿವಿಡೆಂಟ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಬೊಳಿಯಾರು ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ: ಆಟೋ ಚಾಲಕ ದಿನೇಶ್‌ರವರನ್ನು ಭೇಟಿಯಾದ ರಕ್ಷಿತ್ ಶಿವರಾಂ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya
error: Content is protected !!