September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರ ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಮಂದಿ ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Related posts

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಪುದುವೆಟ್ಟು ಶಾಲೆಯಲ್ಲಿ ಬಿತ್ತಿ ಪತ್ರಿಕೆ ‘ಸಂಚಯ’ ಬಿಡುಗಡೆ:

Suddi Udaya
error: Content is protected !!