23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರ ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಮಂದಿ ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Related posts

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya
error: Content is protected !!