ಬೆಳ್ತಂಗಡಿ : ಹಳೆಕೋಟೆ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮವು ಜು.12ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪುತ್ತೂರು ಸುಧಾನ ಕಾಲೇಜು ಪ್ರಾಂಶುಪಾಲರಾದ ಸುಪ್ರೀತ್ ಕೆ. ಪಿ. ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ .ಪಿ. ಕುಶಾಲಪ್ಪ ಗೌಡ ವಹಿಸಿದರು.
ಮುಖ್ಯ ಅಥಿತಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್.ಪದ್ಮ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ. ಎಮ್, ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ ಉಪಸ್ಥಿತರಿದ್ದರು.

ಸಂಖ್ಯಾಶಾಸ್ತ್ರದ ಮುಖ್ಯಸ್ಥರಾದ ಸುರೇಂದ್ರ ವಿದ್ಯಾರ್ಥಿ ಸಂಘದ ಪರಿಚಯ ಸಭೆಗೆ ತಿಳಿಸಿದರು. ಉಪನ್ಯಾಸಕಿ ಸೌಮ್ಯ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋದಿಸಿದರು.
ವಾಣಿ ಪಿಯು ಕಾಲೇಜು ಪ್ರಾಂಶುಪಾಲರು ವಿಷ್ಣು ಪ್ರಕಾಶ್ ಸ್ವಾಗತಿಸಿ, ವಿನಯ ಬಿಢೆ ಕಾರ್ಯಕ್ರಮ ನಿರೂಪಿಸಿದರು.
ವಿದ್ಯಾರ್ಥಿ ನಾಯಕ ಗುರುಪ್ರಸಾದ್ ವಂದಿಸಿದರು.











