ತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ದ ಉದ್ಘಾಟನೆಯು ಜು. 12 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ಜರಗಿತು.

ಸಂಸ್ಥೆಯ ಸಂಚಾಲಕರಾದ ವಂದನೀಯ. ಫಾ. ಅಬೆಲ್ ಲೋಬೊ ಉದ್ಘಾಟಿಸಿ ನೂತನ ವಿದ್ಯಾರ್ಥಿ ಸಂಘಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ವಾಣಿ ಪದವಿ ಕಾಲೇಜಿನ ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಿರ್ ಕೆ.ಎನ್ ಮಾತನಾಡಿ ನಾಯಕನಾದವನು ತಪ್ಪುಗಳನ್ನು ತನ್ನಮೇಲೆ ಹೊತ್ತುಕೊಂಡು ಶ್ರೇಯಸ್ಸನ್ನು ಎಲ್ಲರಿಗೂ ಕೊಡುತ್ತಾನೆ ಎಂದು ಹೇಳಿ, ವಿದ್ಯಾರ್ಥಿಗಳಿಗೆ ನಾಯಕತ್ವದ ಉಪಯೋಗ ಹಾಗೂ ವ್ಯಕ್ತಿತ್ವ ವಿಕಾಸನದ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ ವಿಜಯ್ ಲೋಬೊ ನೂತನ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ವಿದ್ಯಾರ್ಥಿ ಸೆಬಾಸ್ಟಿನ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕಿ ಹೆಝಲ್ ಜಿ಼ಷಾ ಪಿಂಟೋ ಧನ್ಯವಾದ ನೀಡಿದರು. ವಿಶ್ವಾಸ್ ವೇಗಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya
error: Content is protected !!