24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ಅವರು “ಸಿಂಥೆಸಿಸ್ ಅಂಡ್ ಬೈಯೋಲಾಜಿಕಲ್ ಆಕ್ಟಿವಿಟಿ ಸ್ಟಡೀಸ್ ಆಫ್ ಸಮ್ ಸಿಂಪಲ್ ಅಂಡ್ ಫ್ಯೂಸ್‌ಡ್ ನೈಟ್ರೋಜನಸ್ ಹೆಟೆರೋಸೈಕ್ಲಸ್”(Synthesis and Biological Activity Studies of Some Simple and Fused Nitrogenous Heterocycles) ಎಂಬ ಶೀರ್ಷಿಕೆಯಲ್ಲಿ ಮಹಾಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯ ರಸಾಯನಶಾಸ್ತ್ರ ವಿಭಾಗದ ಅಧ್ಯಕ್ಷರು ಹಾಗೂ ಮಾರ್ಗದರ್ಶಕರಾದ ಪ್ರೊ. ಭೋಜ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧ ಮಂಡಿಸಿದ್ದಾರೆ. ಸಮರ್ಥ ಶೋಧನಾ ಕಾರ್ಯಕ್ಕೆ ಬೆಂಗಳೂರು ಸಿಟಿ ಯುನಿವರ್ಸಿಟಿಯ ರಸಾಯನ ಶಾಸ್ತ್ರ ವಿಭಾಗದ ಸೀನಿಯರ್ ಪ್ರೊಪೆಸರ್ ಡಾ. ಹರಿಪ್ರಸಾದ್ ಎಸ್. ಇವರ ಸಮ್ಮುಖದಲ್ಲಿ ಡಾ. ಗಾನವಿ ಡಿ. ಅವರಿಗೆ ಜುಲೈ11 ರಂದು ಪಿಎಚ್.ಡಿ ಪದವಿ ನೀಡಲಾಯಿತು.

ಉಜಿರೆಯ ಲಲಿತನಗರದ ನಿವಾಸಿಯಾಗಿರುವ ಇವರು ಧರ್ಮಸ್ಥಳದ ದೇವಸ್ಥಾನ ಕಚೇರಿಯ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ ಜೈನ್ ಅವರ ಪತ್ನಿ.

Related posts

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಕಚೇರಿ ಉದ್ಘಾಟನೆ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!