September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11 ರಂದು ವರದಿಯಾಗಿದೆ.


ಜು. 11 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಉಪ ನೀರಿಕ್ಷಕರಾದ ಯಲ್ಲಪ್ಪ ಹೆಚ್ ಮಾದರರವರು ಸಿಬ್ಬಂದಿಗಳ ಜೊತೆಯಲ್ಲಿ ಕಡಿರುದ್ಯಾವರ ರಸ್ತೆಯಲ್ಲಿ ಬರುತ್ತಿರುವ ಸಮಯ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಡಿರುದ್ಯಾವರ ಗ್ರಾಮದ ಬೊಳ್ಳೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಕಳವು ಮಾಡಿಕೊಂಡು ಬರುತ್ತಿದ್ದುದನ್ನು ಪತ್ತೆಮಾಡಿದ್ದಾರೆ.


ಅಪಾದಿತ ಪ್ರತೀಕ್ಷ್ ಮತ್ತು ಸಾಗಾಟದ ಪಿಕಪ್ ವಾಹನ ಹಾಗೂ ಪಿಕಪ್ ವಾಹನದಲ್ಲಿದ್ದ ರೂ. 2ಸಾವಿರ ಮೌಲ್ಯದ ಮರಳು,3 ಕಬ್ಬಿಣದ ಬಕೆಟ್, ಮರಳು ತೆಗೆಯಲು ಉಪಯೋಗಿಸಿದ 1 ಕಬ್ಬಿಣದ ಸ್ಟ್ಯಾಂಡ್, 2 ಪ್ಲಾಸ್ಟಿಕ್ ಬುಟ್ಟಿ ಹಾಗೂ 2 ಕಬ್ಬಿಣದ ಹಾರೆಯನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!