30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

ಕಡಿರುದ್ಯಾವರ: ಇಲ್ಲಿಯ ಬೊಳ್ಳೂರು ಎಂಬಲ್ಲಿಯ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್‌ನಲ್ಲಿ ಸಾಗಾಟ ಮಾಡುತ್ರಿರುವ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ಪಿಕಪ್ ಹಾಗೂ ಮರಳು ಸಹಿತ ಸಾಮಾಗ್ರಿಗಳನ್ನು ವಶಪಡಿಸಿಕೊಂಡ ಪ್ರಕರಣ ಜು.11 ರಂದು ವರದಿಯಾಗಿದೆ.


ಜು. 11 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಉಪ ನೀರಿಕ್ಷಕರಾದ ಯಲ್ಲಪ್ಪ ಹೆಚ್ ಮಾದರರವರು ಸಿಬ್ಬಂದಿಗಳ ಜೊತೆಯಲ್ಲಿ ಕಡಿರುದ್ಯಾವರ ರಸ್ತೆಯಲ್ಲಿ ಬರುತ್ತಿರುವ ಸಮಯ ಕಡಿರುದ್ಯಾವರ ಗ್ರಾಮದ ಬೊಳ್ಳೂರು ಎಂಬಲ್ಲಿ ಪ್ರತೀಕ್ಷ್ ಎಂಬಾತನು ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಕಡಿರುದ್ಯಾವರ ಗ್ರಾಮದ ಬೊಳ್ಳೂರು ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ಕಳವು ಮಾಡಿಕೊಂಡು ಬರುತ್ತಿದ್ದುದನ್ನು ಪತ್ತೆಮಾಡಿದ್ದಾರೆ.


ಅಪಾದಿತ ಪ್ರತೀಕ್ಷ್ ಮತ್ತು ಸಾಗಾಟದ ಪಿಕಪ್ ವಾಹನ ಹಾಗೂ ಪಿಕಪ್ ವಾಹನದಲ್ಲಿದ್ದ ರೂ. 2ಸಾವಿರ ಮೌಲ್ಯದ ಮರಳು,3 ಕಬ್ಬಿಣದ ಬಕೆಟ್, ಮರಳು ತೆಗೆಯಲು ಉಪಯೋಗಿಸಿದ 1 ಕಬ್ಬಿಣದ ಸ್ಟ್ಯಾಂಡ್, 2 ಪ್ಲಾಸ್ಟಿಕ್ ಬುಟ್ಟಿ ಹಾಗೂ 2 ಕಬ್ಬಿಣದ ಹಾರೆಯನ್ನು ಸ್ವಾದೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!