July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

ಬೆಳಾಲು: ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ ಬೆಳಾಲು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ – 2 ರ ಕಾರ್ಯಕ್ರಮದಲ್ಲಿ ವರಕವಿ ಬೇಂದ್ರೆಯವರ ಕುರಿತು ಉಪನ್ಯಾಸ ಜರಗಿತು.

ದೀಪ ಬೆಳಗಿಸಿ, ಬೇಂದ್ರೆಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ. ಮಂ. ಪದವಿ ಕಾಲೇಜು ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಡಾ. ನಾಗಣ್ಣ ಡಿ.ಎ ಮಾತನಾಡಿ ಬೇಂದ್ರೆಯವರು ಆಡು ಮಾತಿನ ಶೈಲಿಯಲ್ಲಿ ಕವನಗಳನ್ನು ರಚಿಸಿ ಜನಜನಿತರಾದವರು, ಸರಳ ಜೀವನ, ವ್ಯಕ್ತಿತ್ವದಿಂದ ಶ್ರೇಷ್ಠತೆಯನ್ನು ಪಡೆದುಕೊಂಡವರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ ಮಾತನಾಡಿ ಸಾಹಿತ್ಯಾಸಕ್ತಿ ಮತ್ತು ಓದುವ ಹವ್ಯಾಸ ಬೆಳೆಸಿಕೊಳ್ಳುವುದರಿಂದ ಜ್ಞಾನಶಕ್ತಿ ವಿಸ್ತರಿಸಲು ಸಾಧ್ಯವಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಇಂತಹ ಕಾರ್ಯಕ್ರಮದಿಂದ ಸಾಹಿತ್ಯದ ಕಂಪು ಎಲ್ಲೆಡೆ ಪಸರಿಸಲಿ ಎಂದರು.

ವಿದ್ಯಾರ್ಥಿಗಳು ಬೇಂದ್ರೆಯವರ ಭಾವಗೀತೆಗಳನ್ನು ಹಾಡಿದರು.

ಶಿಕ್ಷಕರಾದ ಕಿರಣ್ ಸ್ವಾಗತಿಸಿ, ಕು. ಐಶ್ವರ್ಯ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya

ಗ್ಯಾರಂಟಿಗಳ ತೊಳಲಾಟಗಳಲ್ಲೇ ಮುಳುಗಿರುವ ರಾಜ್ಯದಲ್ಲಿ ಅಧಿಕಾರವಿರುವ ಕಾಂಗ್ರೇಸ್‌ ಸರಕಾರ ರಾಜ್ಯದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ : ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!