July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣದ ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ದೂರುದಾರರ ಪರ ವಕೀಲರು ಹಾಗೂ ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮುಂದಿನ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿರುವ ಅವರು ಜಿಲ್ಲೆಯ ಸಕ್ಷಮ ಪ್ರಾಧಿಕಾರವು ‘ ಈ ಪ್ರಕರಣದಲ್ಲಿ ಸಾಕ್ಷಿಯ ರಕ್ಷಣೆಗೆ ಜು. 10ರಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದೆ. ಶುಕ್ರವಾರ ಸಾಕ್ಷಿ, ದೂರುದಾರ ಬೆಳ್ತಂಗಡಿಯ ನ್ಯಾಯಾಲಯದ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೆ ಸ್ವತಃ ತಾವೇ ಹೊರತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ಹಾಜರುಪಡಿಸಿದ್ದಾರೆ ಎಂದು ಎಸ್ಪಿಯವರು ಹೇಳಿಕೆ ನೀಡಿದ್ದಾರೆ.

ಸಾಕ್ಷಿ, ದೂರುದಾರರ ಗುರುತಿನ ರಕ್ಷಣೆಯ ವಿಚಾರದಲ್ಲಿ, ಸಾಕ್ಷಿ, ದೂರುದಾರರನ್ನು ಪ್ರತಿನಿಧಿಸಿರುವ ವ್ಯಕ್ತಿಗಳು ಪತ್ರಿಕಾ ಪ್ರಕಟಣೆ ಹಾಗೂ ಎಫ್‌ಐಆ‌ರ್ ಪ್ರತಿಯನ್ನು ಮಾಧ್ಯಮಗಳಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೀಡುವ ಮೂಲಕ, ಸಾಕ್ಷಿ, ದೂರುದಾರರ ವಯಸ್ಸು ವೃತ್ತಿಯ ಸ್ಥಳ, ಚಹರೆ, ವೃತ್ತಿಯಲ್ಲಿದ್ದ ಅವಧಿ, ಸಮುದಾಯ ಮತ್ತಿತರ ಮಾಹಿತಿಗಳನ್ನು ಬಹಿರಂಗಗೊಳಿಸಿದ್ದಾರೆ. ಇದರ ಆಧಾರದಲ್ಲಿ ಸ್ಥಳೀಯ ಅನೇಕರು ಸಾಕ್ಷಿ, ದೂರುದಾರರನ್ನು ಅಂದಾಜಿಸಿರುತ್ತಾರೆ. ಆದರೆ ಎಲ್ಲಾ ಅಧಿಕೃತ ಮೂಲಗಳಿಂದ ಸಾಕ್ಷಿ ದೂರುದಾರರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಡಿಎಸ್ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ಆರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Related posts

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!