22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮುಖ್ಯ ದ್ವಾರದ ಬಳಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನ ಕಳವು

ಧರ್ಮಸ್ಥಳ: ಧರ್ಮಸ್ಥಳ ಮುಖ್ಯ ದ್ವಾರದ ಬಳಿಯ ಪಾರ್ಕಿಂಗ್‌ನಲ್ಲಿ ದ್ವಿಚಕ್ರವಾಹವನ್ನು ಕಳ್ಳರು ಕಳವು ಮಾಡಿದ ಪ್ರಕರಣ ಜು.10 ರಂದು ವರದಿಯಾಗಿದೆ.


ನಿಡ್ಲೆ ಗ್ರಾಮದ ಮಜಲುಮಾರು ಸಂಜೀವ ಗೌಡರ ಪುತ್ರಿ ಉಜಿರೆ ಪ್ರಕಾಶ್ ಇಲೆಕ್ಟ್ರಾನಿಕ್ಸ್‌ನಲ್ಲಿ ಉದ್ಯೋಗದಲ್ಲಿರುವ ಆಶಾ ಅವರು ನಿಡ್ಲೆಯಿಂದ ಧರ್ಮಸ್ಥಳ ತನಕ ದ್ವಿಚಕ್ರವಾಹನದಲ್ಲಿ ಬಂದು ಧರ್ಮಸ್ಥಳದ ಮಹಾದ್ವಾರದ ಬಳಿಯ ವಾಹನ ಪಾರ್ಕ್‌ನಲ್ಲಿ ವಾಹನ ನಿಲ್ಲಿಸಿ ಉಜಿರೆಗೆ ಬರುತ್ತಿದ್ದರು. ಜು.10 ರಂದು ಬೆಳಿಗ್ಗೆ ಎಂದಿನಂತೆ ದ್ವಿಚಕ್ರ ವಾಹನ KA 21 X 7375 ನೇ ನಂಬ್ರದ ಹೋಂಡಾ ಕಂಪನಿಯ ಡಿಯೋ ವಾಹನವನ್ನು ಪಾರ್ಕ್ ಮಾಡಿ ಕೆಲಸಕ್ಕೆ ಉಜಿರೆಗೆ ಬಂದಿದ್ದರು. ಸಂಜೆ ಕೆಲಸ ಮುಗಿಸಿ ಹೋಗುವಾಗ ತಾನು ಪಾರ್ಕ್ ಮಾಡಿದ ಸ್ಥಳದಲ್ಲಿ ದ್ವಿಚಕ್ರವಾಹನ ಇರಲಿಲ್ಲ. ನಂತರ ಅಕ್ಕ ಪಕ್ಕದಲ್ಲಿ ಹುಡುಕಾಡಿ ಎಲ್ಲಿಯೂ ಪತ್ತೆಯಾಗಲಿಲ್ಲ. ಕೂಡಲೇ ತನ್ನ ತಂದೆಯವರಿಗೆ ವಿಷಯ ತಿಳಿಸಿ ಅವರ ಎಲ್ಲಾ ಕಡೆ ಹುಡುಕಾಡಿ ಪತ್ತೆಯಾಗದಿರುವುದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಳವಾದ ದ್ವಿಚಕ್ರವಾಹನದ ಮೌಲ್ಯ ರೂ. 25 ಸಾವಿರ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾರ್ಪಿಕೋತ್ಸವ ಹಾಗೂ ಪ್ರೌಢಶಾಲೆಯ ಬೆಳ್ಳಿ ಮಹೋತ್ಸವದ ಸಮಾರೋಪ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!