September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆಯು ಜು.11ರಂದು ನಡೆಯಿತು.


ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ.ಎಜುಕೇಶನ್ ಸೊಸೈಟಿ ಉಜಿರೆ ಇಲ್ಲಿಯ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಧನ್ಯ ಕುಮಾರ್ ಇವರು ಭಾಗವಹಿಸಿದ್ದರು .


ಪೋಷಕರನ್ನು ಕುರಿತು ಮಾತನಾಡಿದ ಇವರು ಮಕ್ಕಳಿಗೆ ಮನೆಯಿಂದಲೇ ಶಿಸ್ತಿನ ಬಗ್ಗೆ ಪಾಠವನ್ನು ಹೇಳಬೇಕು. ಪ್ರತಿಯೊಂದು ಮಗುವಿನ ಚಲನ ವಲನಗಳನ್ನು ಅರಿತು ಸೂಕ್ತ ರೀತಿಯ ಮಾರ್ಗದರ್ಶನಗಳನ್ನು ನೀಡಬೇಕು. ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.

ಜೋಸೆಫ್ ಇವರು ಶಾಲಾ ಸಮಗ್ರ ಮಾಹಿತಿಯನ್ನು ನೀಡಿದರು. 2025-26ನೇ ಶೈಕ್ಷಣಿಕ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷ ರಾಜೇಶ್, ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜ್ ರಜಪೂತ್, ಹಿರಿಯ ಶಿಕ್ಷಕರಾದ ಜೋಸೆಫ್, ಶ್ರೀಮತಿ ಶ್ರೀಜಾ ಎ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶ್ರೀಮತಿ ಪೂರ್ಣಿಮಾ ಕೆ. ಎಂ ನಿರೂಪಿಸಿದ ಕಾರ್ಯಕ್ರಮಕ್ಕೆ ಶ್ರೀಮತಿ ಕಾವ್ಯ ಸ್ವಾಗತಿಸಿ ಶ್ರೀಮತಿ ಉಷಾ ಧನ್ಯವಾದವಿತ್ತರು .

Related posts

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya
error: Content is protected !!