July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಪಡಂಗಡಿ: ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡೀಸ್ ಇವರ ಅಧ್ಯಕ್ಷತೆಯಲ್ಲಿ ಸಮೃದ್ಧಿ ಸಭಾ ಭವನದಲ್ಲಿ ಜು.12 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘವು ಸಾಲ ಹಾಗೂ ಸಾಲೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರಸಕ್ತ ವರ್ಷದಲ್ಲಿ ಸಂಘವು ರೂ.186 ಕೋಟಿ ವ್ಯವಹಾರ ನಡೆಸಿ ಒಂದು ಕೋಟಿ ತೊಂಬತ್ತು ಸಾವಿರದ ನಾಲ್ಕು ರೂಪಾಯಿ ಲಾಭ ಗಳಿಸಿದೆ. ರೈತ ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಡಂಗಡಿ ಸಹಕಾರಿ ಸಂಘದ ಉಪಾಧ್ಯಕ್ಷ ನರೇಂದ್ರ ಕುಮಾರ್,ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಕೇಶಿನಿ ಎ, ನಿರ್ದೇಶಕರಾದ ನಾರಾಯಣ ಮೂಲ್ಯ,ಸಂತೋಷ್ ಶೆಟ್ಟಿ, ರವಿ ಕುಮಾರ್ ಕೆ.ವೈ,ರಾಮು, ಪದ್ಮನಾಭ ನಾಯ್ಕ,ಕೃಷ್ಣಪ್ಪ ಪೂಜಾರಿ, ಉಮೇಶ, ಉಷಾ, ಸುನಂದ, ನವೀನ್ ಹಾಗೂ ಸಹಕಾರಿ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ದೀಪ್ತಿ,ಸಹನ ಪ್ರಾರ್ಥನೆಗೈದು, ನಿರ್ದೆಶಕಿ ಉಷಾ ಸ್ವಾಗತಿಸಿದರು. ನಿವೃತ್ತ ಶಿಕ್ಷಕ ಶಿವಶಂಕರ್ ಭಟ್ ನಿರೂಪಿಸಿದರು.

Related posts

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya
error: Content is protected !!