September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

ಬೆಳ್ತಂಗಡಿ: ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರ ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು.

ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಮಂದಿ ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಪೆರಿಂಜೆ ಎಸ್ ಡಿ ಎಂ ಶಾಲೆಯಲ್ಲಿ ಹೆಚ್ ಪಿವಿ ಲಸಿಕೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya
error: Content is protected !!