23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ವಿಶ್ವಕರ್ಮ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಟವರ್ ಬಿದ್ದ ಕಿರಿಯಾಡಿ ಕ್ರಾಸ್ ಬಳಿ ಮೆಸ್ಕಾಂನಿಂದ ವಿದ್ಯುತ್ ಕಂಬ ಅಳವಡಿಸಿ ವಿದ್ಯುತ್ ಪೂರೈಕೆ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya
error: Content is protected !!