July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಸೈoಟ್ ಜಾರ್ಜ್ ಚರ್ಚಿನಲ್ಲಿ ಯುವಜನ ಸಮ್ಮೇಳನ

ಬೆಳ್ತಂಗಡಿ; ಉಜಿರೆ ಸೈಂಟ್ ಜಾರ್ಜ್ ಚರ್ಚಿನಲ್ಲಿ ಜು.16 ರಂದು ಯುವಜನ ಸಮ್ಮೇಳನ ನಡೆಯಿತು.


ಬೆಳಗ್ಗೆ 7.30 ಕ್ಕೆ ಬಲಿಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸೈಂಟ್ ಜಾರ್ಜ್ ಚರ್ಚಿನ ಧರ್ಮಗುರುಗ ಫಾ. ಬಿಜು ಮ್ಯಾಥ್ಯೂ ಅಂಬಟ್ ರವರು ಬಲಿಪೂಜೆ ಅರ್ಪಿಸಿದರು. ಚರ್ಚಿನ ಎಲ್ಲ ಯುವಕ ಯುವತಿಯರು ಬಲಿಪೂಜೆಯಲ್ಲಿ ಕಾಣಿಕೆಯನ್ನು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಎಲ್ಲ ಯುವಜನರಿಗೆ ಚರ್ಚಿನ ಹೆಸರಲ್ಲಿ ಶುಭ ಹಾರೈಸಲಾಯಿತು. ತದನಂತರ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯದಲ್ಲಿ ಅಧ್ಯಕ್ಷರಾಗಿ ಅಶ್ವಿನ್ ತೋಟಕಾಟ್ ರನ್ನು ನೇಮಿಸಲಾಯಿತು. ಹಾಲಿ ಅಧ್ಯಕ್ಷ ಜಿನ್ಸನ್ ತೋಟಂಗರ ರವರಿಗೆ ಧನ್ಯವಾದ ಸಮರ್ಪಿಸಲಾಯಿತು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!