July 23, 2026
ಗ್ರಾಮಾಂತರ ಸುದ್ದಿ

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ವಲಯದ ಕಳಿಯ ವಿಭಾಗದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ಜು. 13ರಂದು ನಡೆಯಿತು. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ ರವರು ದೀಪ ಬೆಳಗಿಸಿ ಮಹಿಳೆಯರು ನಾಲ್ಕು ಗೋಡೆಯಿಂದ ಹೊರ ಬಂದು ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕಾದರೆ ಮಾತೃಶ್ರೀ ಹೇಮಾವತಿ ಅಮ್ಮನವರು ಪ್ರಾರಂಭಿಸಿದ ಜ್ಞಾನ ವಿಕಾಸ ಕೇಂದ್ರದಿoದ ಎಂದರು

. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಯಶೋಧರ ಸರ್ ರವರು ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ಉತ್ತಮ ಮಾಹಿತಿ ಯೊಂದಿಗೆ ಆತ್ಮ ಸ್ಥೈರ್ಯ ವನ್ನು ನೀಡುತ್ತದೆ. ಕೇಂದ್ರವು ಉತ್ತಮ ರೀತಿಯಲ್ಲಿ ಮುಂದುವರಿಯಲು ಆಸಕ್ತಿ ಮುಖ್ಯವಾಗಿರುತ್ತದೆ ಎಲ್ಲರೂ ಕೇಂದ್ರದ ಸಭೆಯಲ್ಲಿ ಆಸಕ್ತಿ ಯಿಂದ ಭಾಗವಹಿಸುವಂತೆ ತಿಳಿಸಿದರು . ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ಸುಬಾಷಿಣಿ , ಗ್ರಾಮ ಪಂಚಾಯತ್ ಸದಸ್ಯರಾದ ಕುಸುಮ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೇಂದ್ರದ ದಾಖಲಾತಿ ಯನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ ತಿಲೋತ್ತಮ ರವರು ಧನ್ಯವಾದ ನೀಡಿದರು.

Related posts

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!