26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಬೆಳ್ತಂಗಡಿ ವಲಯದ ಕಳಿಯ ವಿಭಾಗದ ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ ಜು. 13ರಂದು ನಡೆಯಿತು. ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಜನಾರ್ದನ ಗೌಡ ರವರು ದೀಪ ಬೆಳಗಿಸಿ ಮಹಿಳೆಯರು ನಾಲ್ಕು ಗೋಡೆಯಿಂದ ಹೊರ ಬಂದು ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಉತ್ತಮ ಸಾಧನೆ ಮಾಡಬೇಕಾದರೆ ಮಾತೃಶ್ರೀ ಹೇಮಾವತಿ ಅಮ್ಮನವರು ಪ್ರಾರಂಭಿಸಿದ ಜ್ಞಾನ ವಿಕಾಸ ಕೇಂದ್ರದಿoದ ಎಂದರು

. ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರಾದ ಯಶೋಧರ ಸರ್ ರವರು ಜ್ಞಾನ ವಿಕಾಸ ಕೇಂದ್ರವು ಮಹಿಳೆಯರಿಗೆ ಉತ್ತಮ ಮಾಹಿತಿ ಯೊಂದಿಗೆ ಆತ್ಮ ಸ್ಥೈರ್ಯ ವನ್ನು ನೀಡುತ್ತದೆ. ಕೇಂದ್ರವು ಉತ್ತಮ ರೀತಿಯಲ್ಲಿ ಮುಂದುವರಿಯಲು ಆಸಕ್ತಿ ಮುಖ್ಯವಾಗಿರುತ್ತದೆ ಎಲ್ಲರೂ ಕೇಂದ್ರದ ಸಭೆಯಲ್ಲಿ ಆಸಕ್ತಿ ಯಿಂದ ಭಾಗವಹಿಸುವಂತೆ ತಿಳಿಸಿದರು . ಒಕ್ಕೂಟದ ಅಧ್ಯಕ್ಷ ರಾದ ಶ್ರೀಮತಿ ಸುಬಾಷಿಣಿ , ಗ್ರಾಮ ಪಂಚಾಯತ್ ಸದಸ್ಯರಾದ ಕುಸುಮ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೇಂದ್ರದ ದಾಖಲಾತಿ ಯನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವಿ ಉಪಸ್ಥಿತರಿದ್ದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾವಸಂತ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿ ಸೌಮ್ಯ ಸ್ವಾಗತಿಸಿ ತಿಲೋತ್ತಮ ರವರು ಧನ್ಯವಾದ ನೀಡಿದರು.

Related posts

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!