July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗೀತಾ ದಾಮೋದ‌ರ್ ಆಚಾರ್ಯ ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸುಟ್ಟು ಹೋಗಿರುವ ಘಟನೆ ಜು.13ರಂದು ಮುಂಜಾನೆ ನಡೆದಿದೆ.

ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ಅನೇಕ ಕುಟುಂಬಸ್ಥರು ಪಾಲ್ಗೊಂಡಿದ್ದರು. ಇವರಿಗೆ ಬೆಳಗ್ಗಿನ ಉಪಹಾರ ತಿಂಡಿ ಮಾಡಲು ಅಡುಗೆ ಕೋಣೆಗೆ ತೆರಳಿ ಗ್ಯಾಸ್ ಪರಿಶೀಲಿಸಿ ನಂತರ ಅಡುಗೆ ಮಾಡಲು ಮುಂದಾದಾಗ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದವರು ಗೋಣಿ, ಮರಳು ಹಾಕಿದರು ಯಾವುದೇ ಪ್ರಯೋಜನವಾಗದೆ ಬೆಂಕಿ ಅಡುಗೆ ಕೋಣೆಗೆ ಆವರಿಸಿ ಅಡುಗೆ ಪರಿಕರಗಳು ಸುಟ್ಟು ಹೋಗಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಸದಸ್ಯ ಸುಧಾಕ‌ರ್ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

Related posts

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya
error: Content is protected !!