September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗೀತಾ ದಾಮೋದ‌ರ್ ಆಚಾರ್ಯ ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸುಟ್ಟು ಹೋಗಿರುವ ಘಟನೆ ಜು.13ರಂದು ಮುಂಜಾನೆ ನಡೆದಿದೆ.

ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ಅನೇಕ ಕುಟುಂಬಸ್ಥರು ಪಾಲ್ಗೊಂಡಿದ್ದರು. ಇವರಿಗೆ ಬೆಳಗ್ಗಿನ ಉಪಹಾರ ತಿಂಡಿ ಮಾಡಲು ಅಡುಗೆ ಕೋಣೆಗೆ ತೆರಳಿ ಗ್ಯಾಸ್ ಪರಿಶೀಲಿಸಿ ನಂತರ ಅಡುಗೆ ಮಾಡಲು ಮುಂದಾದಾಗ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದವರು ಗೋಣಿ, ಮರಳು ಹಾಕಿದರು ಯಾವುದೇ ಪ್ರಯೋಜನವಾಗದೆ ಬೆಂಕಿ ಅಡುಗೆ ಕೋಣೆಗೆ ಆವರಿಸಿ ಅಡುಗೆ ಪರಿಕರಗಳು ಸುಟ್ಟು ಹೋಗಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಸದಸ್ಯ ಸುಧಾಕ‌ರ್ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

Related posts

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!