25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ 2೦24 -25 ನೇ ಸಾಲಿನ ಮಹಾಸಭೆಯು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮುಖ್ಯ ಆಯುಕ್ತರಾದ ಡಾ.ಮೋಹನ್ ಅಳ್ವ ರವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಸಂಸ್ಥೆಯ ಗೌರವಧ್ಯಕ್ಷರು ಹಾಗೂ ಶಾಸಕರಾದ ಮಾನ್ಯ ಶ್ರೀ ಹರೀಶ್ ಪೂಂಜರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗೆ ನೀಡುತ್ತಿರುವ ಸಹಕಾರ ಹಾಗೂ ಸಲಹೆ ಸೂಚನೆ ಗಳಿಗೆ ಅವರನ್ನು ಸ್ಥಳೀಯ ಸಂಸ್ಥೆಯಿಂದ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಡಾ. ಮೋಹನ್ ಆಳ್ವಾರವರು ಅಭಿನಂದಿಸಿದರು.


‌‌‌ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಪ್ರಮೀಳ ವರಿಂದ ವರದಿ ಮಂಡನೆಯಾಗಿ ಮಂಜೂರಾತಿ ಪಡೆದುಕೊಂಡು, ಕೋಶಾಧಿಕಾರಿ ಬೆಳಿಯಪ್ಪ ಕೆ ಯವರಿಂದ ಲೆಕ್ಕಪತ್ರ ಮಂಡನೆಯಾಗಿ ಮಂಜೂರಾತಿ ಪಡೆದುಕೊಂಡಿತು. ಹೊಸದಾಗಿ ತರಬೇತಿಗೊಂಡು ಆಗಮಿಸಿದ ಕಬ್ ಬುಲ್ ಬುಲ್ ಸ್ಕೌಟ್ಸ್ ಗೈಡ್ ರೋವರ್ ರೇಂಜರ್ ಶಿಕ್ಷಕ ಶಿಕ್ಷಕಿಯರನ್ನು ಗುರುತಿಸಿ ಗೌರವಿಸಲಾಯಿತು .
ಜಿಲ್ಲಾ ಕೋಶಧಿಕಾರಿ ನವೀನ್ ಅಂಬೂರಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಸಂಸ್ಥೆಯ ಅಧ್ಯಕ್ಷರಾದ ಪದ್ಮ ಕುಮಾರ್, ಜಿಲ್ಲಾ ಸಹಾಯಕ ಆಯುಕ್ತರುಗಳಾದ ಬಿ ವಿಠಲ್ ಶೆಟ್ಟಿ, ಬಿ ಸೋಮಶೇಖರ್ ಶೆಟ್ಟಿ, ಉಪಾಧ್ಯಕ್ಷರಾದ ಸುಲೋಚನಾ, ಕಾರ್ಯದರ್ಶಿ ಪ್ರಮೀಳಾ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಕೋಶಾಧಿಕಾರಿ ಬೆಳಿಯಪ್ಪ ಕೆ ರೋವರ್ ಸ್ಕೌಟ್ ಲೀಡರ್ ವಾಣಿ ಪದವಿಪೂರ್ವ ಕಾಲೇಜ್ ಹಾಗೂ ಸ್ಕೌಟ್ಸ್ ಗೈಡ್ಸ್ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಯವರು ಶಿಕ್ಷಕ ಶಿಕ್ಷಕಿಯರಿಗೆ ಸ್ಕೌಟ್ಸ್ ಗೈಡ್ಸ್ ನ ಬಗ್ಗೆ ಮಾರ್ಗದರ್ಶನ ನೀಡಿದರು.

   ನಿರೂಪಣೆ ಯಲ್ಲಿ ಲಕ್ಷ್ಮೀಶ ರೋವರ್ ಸ್ಕೌಟ್ ಲೀಡರ್ ಎಸ್ ಡಿ ಎಂ ಪದವಿಪೂರ್ವ ಕಾಲೇಜು ಉಜಿರೆ ನೇರವೆರಿಸಿ , ಕಾರ್ಯಕ್ರಮ ದಲ್ಲಿ ಪದ್ಮಕುಮಾರ್ ಸ್ವಾಗತಿಸಿ ಪ್ರಮೀಳಾ ವಂದಿಸಿದರು.

Related posts

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ಗುಂಪುಗಳ ನಡುವೆ ಅಹಿತಕರ ಘಟನೆ: ಧರ್ಮಸ್ಥಳ ಠಾಣೆಯಲ್ಲಿ 4 ಪ್ರಕರಣ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
error: Content is protected !!