25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಕಡಬ, ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ. ಎಂಬವರ ದೂರಿನಂತೆ, ಜು.11 ರಂದು ತನ್ನ ಪೇಸ್‌ ಬುಕ್‌ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇನ್ನೊಂದು ಪ್ರಕರಣದಲ್ಲಿ, ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌ ಎಂಬವರ ದೂರಿನಂತೆ, ಜು.11ರಂದು ಮೊಬೈಲ್ ನಲ್ಲಿ ತನ್ನ ಫೇಸ್ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಡಾಕ್ಟರ್ ವರ್ಮಾ ಎಂಬ ಪೇಸ್ಬುಕ್ ಖಾತೆಯಲ್ಲಿ, ಧರ್ಮಸ್ಥಳದ ಧಾರ್ಮಿಕ ಶ್ರಧ್ದಾಕೆಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶವಿರುವ ಹಾಗೂ ಆಶ್ಲೀಲವಾಗಿ ಚಿತ್ರಿಸಿರುವ ಭಾವಚಿತ್ರವನ್ನು ಪೋಸ್ಟ್ ಮಾಡಿರುವುದು ಕಂಡುಬಂದಿರುತ್ತದ್ದು, ಈ ಬಗ್ಗೆ ಅವರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 59/2025 ಕಲಂ: 296 ಬಿಎನ್‌ ಎಸ್‌ 2023 ರಂತೆ‌ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya
error: Content is protected !!