25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕವಿ ಸಮ್ಮಿಲನ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಬೆಳ್ತಂಗಡಿ ತಾಲೂಕು ಘಟಕ ಇದರ ನೇತೃತ್ವದಲ್ಲಿ ‘ಹಸಿರೇ ನಮ್ಮ ಉಸಿರು’ ವಿಷಯದ ಕುರಿತು ಕವಿ ಸಮ್ಮಿಲನ ಕಾರ್ಯಕ್ರಮ ಬೆಳ್ತಂಗಡಿಯ ಜೇಸಿ ಭವನ ಜರುಗಿತು.

ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಕವನಗಳ ಅವಲೋಕನದ ನಿರ್ವಹಣೆಯನ್ನು ಉಪನ್ಯಾಸಕಿ ಹೇಮಾವತಿ ಕೆ.ನಡೆಸಿದರು. ತಾಲೂಕು ಸಮಿತಿ ಉಪಾಧ್ಯಕ್ಷ ರಾಮಕೃಷ್ಣ ಬದನಾಜೆ, ಕಾರ್ಯದರ್ಶಿ ಸುಭಾಷಿಣಿ,ಸಹ ಕಾರ್ಯದರ್ಶಿ ಸಂತೋಷಿನಿ ಕಾರಂತ್, ಮಹಿಳಾ ಪ್ರಕಾರದ ಕೋಶಾಧಿಕಾರಿ ವನಜಾ ಜೋಷಿ,ಸದಸ್ಯರಾದ ದಿವಾಕರ್ ಕೊಕ್ಕಡ ,ಶಿವಪ್ರಸಾದ್ ಸುರ್ಯ,ಕೇಶವ ಭಟ್ ಅತ್ತಾಜೆ ಉಪಸ್ಥಿತರಿದ್ದರು.


ಅಭಾಸಪ ಮಹಿಳಾ ಪ್ರಕಾರ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷೆ ಆಶಾ ಅಡೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಳ್ತಂಗಡಿ ಪರಿಸರದ ಕವಿಗಳಾದ ವೃಂದಾ ತಾಮನ್ಕರ್, ಉಷಾ ಶಶಿಧರ್ ಶೆಟ್ಟಿ,ಅಶ್ವಿನಿ ಹೆಬ್ಬಾರ್,ಅಶ್ವಿಜಾ ಶ್ರೀಧರ್, ಅಕ್ಷತಾ ಅಡೂರ್,ಜ್ಯೋತಿ, ಜ್ಯೋತಿ ಬಾಳಿಗ, ಸುಮತಿ ಪಿ. ಕಾರ್ಕಳ,ಧನ್ಯಾ ನಾವುಳೆ, ಆಶಾ, ತೃಷಾ, ಸೃಷ್ಟಿ, ಮೋಕ್ಷಿತ್ ಕೆ., ರಕ್ಷಾ ಎನ್., ಪುಣ್ಯಶ್ರೀ, ತ್ರಿಷಾ ಜೈನ್, ಮೋಕ್ಷಿತಾ, ಮೋಕ್ಷಾ ವರ್ಷಿತಾ, ರಶ್ಮಿ ಸ್ವರಚಿತ ಕವನ ವಾಚಿಸಿದರು.


ಮಹಿಳಾ ಪ್ರಕಾರದ ಪ್ರಮುಖ್ ವನಿತಾ ಶೆಟ್ಟಿ ವಂದಿಸಿದರು. ಕಾರ್ಯದರ್ಶಿ ಮೇಘನಾ ಪ್ರಶಾಂತ್ ಹೊಳ್ಳ ಕಾರ್ಯಕ್ರಮ ನಿರೂಪಿಸಿದರು.ಅಕ್ಷತಾ ಅಡೂರ್ ಸಹಕರಿಸಿದರು.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!