24 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಚ್ಛತಾ ವಸ್ತುಗಳ ಕೊಡುಗೆ

ಬಂದಾರು : ಇಲ್ಲಿನ ಕುಂಟಾಲಪಲ್ಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ ಜುಲೈ10ರಂದು
ಪ್ರಾರ್ಥನಾ ಅವಧಿಯ ಸಂದರ್ಭದಲ್ಲಿ


ಕವುಚಿನ್ ಕೃಷಿಕ ಸೇವಾ ಕೇಂದ್ರ ದಯಾಳ್ ಬಾಗ್ ವಿಮುಕ್ತಿ ಲಾಯಿಲಾ ಸಂಸ್ಥೆಯ ವತಿಯಿಂದ ಶಾಲಾ ಸ್ವಚ್ಛತೆಗೆ ಬಳಸುವ ವಸ್ತುಗಳಾದ ಫಿನಾಯಿಲ್, ಬಕೆಟ್, ಮಗ್ ಮತ್ತು ಬ್ರಶ್ ಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇಲ್ಲಿನ ಸಿಎಚ್‌ಒ ಜಗದೀಶ್ ಅವರು ಮಕ್ಕಳಿಗೆ ಪ್ರಾತ್ಯಕ್ಷಿಕೆ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರಲ್ಲದೆ
ಕೈತೊಳೆಯುವ ವಿಧಾನವನ್ನು ಕಲಿಸಿದರು. ಕಾರ್ಯಕ್ರಮದಲ್ಲಿ ವಿಮುಕ್ತಿ ಸಂಸ್ಥೆಯ ಪ್ರತಿನಿಧಿ ಸವಿತಾ, ಆಶಾ ಕಾರ್ಯಕರ್ತೆ ರಾಜೀವಿ, ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಕೋಡ್ಯೇಲು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಗಾಯತ್ರಿ , ಶಿಕ್ಷಕ ವೃಂದ, ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ನಾವೂರು: ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಸ್ವಚ್ಚತಾ ಆಂದೋಲನ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya
error: Content is protected !!