ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ಗೀತಾ ದಾಮೋದರ್ ಆಚಾರ್ಯ ಮನೆಯಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸೋರಿಕೆಯಾಗಿ ಅಡುಗೆ ಮನೆ ಸುಟ್ಟು ಹೋಗಿರುವ ಘಟನೆ ಜು.13ರಂದು ಮುಂಜಾನೆ ನಡೆದಿದೆ.

ಮನೆಯಲ್ಲಿ ಪೂಜಾ ಕಾರ್ಯಕ್ರಮ ಇದ್ದ ಕಾರಣ ಅನೇಕ ಕುಟುಂಬಸ್ಥರು ಪಾಲ್ಗೊಂಡಿದ್ದರು. ಇವರಿಗೆ ಬೆಳಗ್ಗಿನ ಉಪಹಾರ ತಿಂಡಿ ಮಾಡಲು ಅಡುಗೆ ಕೋಣೆಗೆ ತೆರಳಿ ಗ್ಯಾಸ್ ಪರಿಶೀಲಿಸಿ ನಂತರ ಅಡುಗೆ ಮಾಡಲು ಮುಂದಾದಾಗ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದವರು ಗೋಣಿ, ಮರಳು ಹಾಕಿದರು ಯಾವುದೇ ಪ್ರಯೋಜನವಾಗದೆ ಬೆಂಕಿ ಅಡುಗೆ ಕೋಣೆಗೆ ಆವರಿಸಿ ಅಡುಗೆ ಪರಿಕರಗಳು ಸುಟ್ಟು ಹೋಗಿದೆ.

ಘಟನಾ ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಮಲ, ಸದಸ್ಯ ಸುಧಾಕರ್ ಭೇಟಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.











